ಪೋಸ್ಟ್‌ಗಳು

2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಾಗ -೧೭

मूलम् - ಮೂಲ श्रोत्रियोऽवृजिनोऽकामहतो यो ब्र्ह्मवित्तमः । ब्रह्मण्युपरतः शान्तो निरिन्धन इवानलः। अहेतुक-दयासिन्धुः बन्धुरानमतां सताम्॥३४॥ ಶ್ರೋತ್ರಿಯೋಽವೃಜಿನೋಽಕಾಮಹತೋ ಯೋ ಬ್ರಹ್ಮವಿತ್ತಮಃ| ಬ್ರಹ್ಮಣ್ಯುಪರತಃ ಶಾಂತೋ ನಿರಿಂಧನ ಇವಾನಲಃ | ಅಹೇತುಕ-ದಯಾಸಿಂಧುರ್ಬಂಧುರಾನಮತಾಂ ಸತಾಮ್ ||೩೪|| ಪ್ರತಿಪದಾರ್ಥ: (ಯಃ =ಯಾರು, ಶ್ರೋತ್ರಿಯೋ=ಶ್ರೋತ್ರಿಯನೋ(ಶಾಸ್ತ್ರಾರ್ಥಗಳ ವಿವೇಚನೆಯುಳ್ಳವನು), ಅವೃಜಿನಃ=ಪಾಪವಿಲ್ಲದವನು, ಅಕಾಮಹತಃ=ಬಯಕೆಗಳಿಲ್ಲದವನು,  ಬ್ರಹ್ಮವಿತ್ತಮಃ=ಜ್ಞಾನಿಗಳಲ್ಲಿ ಶ್ರೇಷ್ಠನು, ಬ್ರಹ್ಮಣಿ=ಬ್ರಹ್ಮದಲ್ಲಿ, ಉಪರತಃ=ನೆಲಸಿರುವವನು, ನಿರಿಂಧನಃ ಅನಲಃ ಇವ = ಉರುವಲಿಲ್ಲದ ಬೆಂಕಿಯಂತೆ,  ಶಾಂತಃ= ಶಾಂತನೂ, ಅಹೇತುಕ ದಯಾಸಿಂಧುಃ=ಯಾವ ನಿಮಿತ್ತವೂ ಇಲ್ಲದ ದಯಾಸಿಂಧುವೂ, ಆನಮತಾಂ ಸತಾಮ್= ನಮಿಸುತ್ತಿರುವ ಸತ್ಪುರುಷರಿಗೆ, ಬಂಧುಃ = ಬಾಂಧವನೂ..... (ಆಗಿರುವವನು) ) ತಾತ್ಪರ್ಯ : ಯಾರು ಶ್ರೋತ್ರಿಯನೋ, ಪಾಪರಹಿತನೋ, ಬಯಕೆಗಳೇ ಇಲ್ಲದವನೋ, ಬ್ರಹ್ಮಜ್ಞಾನಿಗಳಲ್ಲಿ ಶ್ರೇಷ್ಠನೋ, ಕೇವಲ ಬ್ರಹ್ಮದಲ್ಲಿ ಮನಸನ್ನು ನೆಟ್ಟಿರುವವನೋ, ಕಟ್ಟಿಗೆಯಲ್ಲಿ ಉರಿದು ಆರಿಹೋದ ಬೆಂಕಿಯಂತೆ (ಉರುವಲೇ ಇಲ್ಲದ) ಶಾಂತನಾಗಿರುವವನೂ, ಯಾವ ನಿಮಿತ್ತವೂ ಇಲ್ಲದೆ ದಯಾಸಿಂಧುವಾಗಿರುವವನೋ, ಶರಣು ಬಂದ ಸಜ್ಜನರಿಗೆ ಬಂಧುವಂತಿರುವವನೋ .....) ವಿವರಣೆ : ಜ್ಞಾನಾರ್ಥಿಯಾಗಿ ಗುರುವಿನ ಬಳಿಸಾರಬೇಕು ಎಂದು ತಿಳಿಸಿದ ನಂ

ಭಾಗ -೧೬

मूलम्  - ಮೂಲ मोक्षकारणसामग्र्यां भक्तिरेव गरियसी । स्वस्वरूपानुसन्धानं भक्तिरित्यभिधीयते ॥३२॥ ಮೋಕ್ಷಕಾರಣಸಾಮಗ್ರ್ಯಾಂ ಭಕ್ತಿರೇವ ಗರೀಯಸೀ | ಸ್ವಸ್ವರೂಪಾನುಸಂಧಾನಂ ಭಕ್ತಿರಿತ್ಯಭಿಧೀಯತೇ ||೩೨|| ಪ್ರತಿಪದಾರ್ಥ :- (ಮೋಕ್ಷಕಾರಣ = ಬಿಡುಗಡೆಗೆ ಕಾರಣವಾಗಿರುವ, ಸಾಮಗ್ರ್ಯಾಂ= ಸಲಕರಣೆಗಳಲ್ಲಿ(ಸಾಧನಗಳಲ್ಲಿ), ಭಕ್ತಿಃ ಏವ = ಭಕ್ತಿಯೇ, ಗರೀಯಸೀ = ದೊಡ್ಡದು(ಶ್ರೇಷ್ಠವಾದುದು). ಸ್ವಸ್ವರೂಪಾನುಸಂಧಾನಂ = ತನ್ನನ್ನುತಾನು ತಿಳಿಯುವುದು, ಭಕ್ತಿಃ ಇತಿ= ಭಕ್ತಿಯೆಂದು, ಅಭಿಧೀಯತೇ = ಹೇಳಲ್ಪಡುತ್ತದೆ ) ತಾತ್ಪರ್ಯ : ಮೋಕ್ಷಕ್ಕೆ (ಬಿಡುಗಡೆಗೆ) ಸಹಾಯಕವಾಗಿರುವ ಸಾಧನ-ಸಲಕರಣೆಗಳಲ್ಲಿ ಭಕ್ತಿಯೂ ಸೇರಿದ್ದು ಇದೇ ಶ್ರೇಷ್ಠವಾದುದಾಗಿರುತ್ತದೆ. ತನ್ನ ನಿಜವಾದ ಸ್ವರೂಪವನ್ನು , ತನ್ನತನವನ್ನು ತಿಳಿದುಕೊಳ್ಳುವುದೇ ಭಕ್ತಿಯೆಂದು ಹೇಳಲ್ಪಟ್ಟಿದೆ. ವಿವರಣೆ : ಇಹದ ಬಂಧನದಿಂದ ಬಿಡಿಸಿಕೊಂಡು ಆತ್ಮಜ್ಞಾನವನ್ನು ಪಡೆಯಲು ಸಾಧನ ಚತುಷ್ಟಯಗಳ ಅಗತ್ಯವನ್ನು ಈಗಾಗಲೇ ವಿವರವಾಗಿ ತಿಳಿದಿದ್ದೇವೆ. ಇದರ ಜೊತೆಗೆ ಭಕ್ತಿಯೂ ಸಹ ತುಂಬ ಹಿರಿದಾದುದು ಎಂದು ಆಚಾರ್ಯರು ಹೇಳುತ್ತಾರೆ. ’ ಭಕ್ತಿ’ ಎಂದರೆ, ತನ್ಮಯರಾಗಿ ಫಲಾಪೇಕ್ಷೆಯಿಂದ ಮಾಡುವ ಸಗುಣ ಬ್ರಹ್ಮೋಪಾಸನೆಯಾಗಲೀ, ನಿತ್ಯಕರ್ಮಾನುಷ್ಠಾನಗಳಾಗಲೀ ಅಥವಾ ಇನ್ಯಾವುದನ್ನೋ ಕುರಿತು ಚಿಂತಿಸುವುದಾಗಲೀ ಅಲ್ಲದೆ ಕೇವಲ ತನ್ನನ್ನು ತಾನು ತಿಳಿಯುವುದು ಅಥವಾ ತನ್ನತನದ ಹುರುಳು-ತಿರುಳನ್ನು

ಭಾಗ -೧೫

ಗ್ರಂಥದ ಮುಂದುವರಿಕೆ:- मूलम् - ಮೂಲ:- मन्दमध्यमरूपाऽपि वैराग्येण शमादिना । प्रसादेन गुरोः सेयं प्रवृद्धा सूयते फलम् ॥२९॥ ಮಂದ-ಮಧ್ಯಮ-ರೂಪಾಪಿ ವೈರಾಗ್ಯೇಣ ಶಮಾದಿನಾ | ಪ್ರಸಾದೇನ ಗುರೋಸ್ಸೇಯಂ ಪ್ರವೃದ್ಧಾ ಸೂಯತೇ ಫಲಮ್ ||೨೯| ಪ್ರತಿಪದಾರ್ಥ :- (ಮಂದ-ಮಧ್ಯಮ-ರೂಪಾ ಅಪಿ= ಮಂದ ಮಧ್ಯಮ ಸ್ಥಿತಿಯಲ್ಲಿದ್ದರೂ, ವೈರಾಗ್ಯೇಣ= ವಿರಾಗದಿಂದದಲೂ, ಶಮಾದಿನಾ = ಶಮಾದಿಗುಣ ಸಾಧನದಿಂದಲೂ, ಗುರೋಃ =ಗುರುವಿನ, ಪ್ರಸಾದೇನ = ಅನುಗ್ರಹದಿಂದ, ಸಾ ಇಯಂ = ಆ ಈ (ಮುಮುಕ್ಷುತ್ವವು), ಪ್ರವೃದ್ಧಾ = ಪ್ರಬಲವಾಗಿ, ಫಲಂ = ಫಲವನ್ನು , ಸೂಯತೇ = ಉಂಟುಮಾಡುತ್ತದೆ. ) ತಾತ್ಪರ್ಯ :  ಇಂತಹ ಮುಮುಕ್ಷುತ್ವವು ಮಂದ ಮಧ್ಯಮ ಸ್ಥಿತಿಯಲ್ಲಿದ್ದರೂ ವೈರಾಗ್ಯ , ಶಮಾದಿಗುಣ ಸಾಧನೆ ಮತ್ತು ಗುರುವಿನ ಅನುಗ್ರಹದಿಂದ (ಉಪದೇಶದಿಂದ) ಪ್ರಬಲವಾಗಿ ಮೋಕ್ಷರೂಪವಾದ ಫಲವು ಉಂಟಾಗುತ್ತದೆ. ವಿವರಣೆ : ಸಾಧನ ಚತುಷ್ಟಯದ ನಂತರ ಆಚಾರ್ಯರು ಮುಂದುವರಿದು ಮುಮುಕ್ಷುತ್ವದ ಬಗೆಗೆ ಹೇಳುತ್ತಾರೆ.  ಮುಮುಕ್ಷುತ್ವ ಅಥವಾ ಬಿಡುಗಡೆಯ ಬಯಕೆ ಎನ್ನುವುದು ಎಲ್ಲರಲ್ಲೂ ಒಂದೇ ತೆರನಾಗಿ ಇರುವುದಿಲ್ಲ. ಕೆಲವರಿಗೆ ಮಂದ (Slow)ವಾಗಿರುತ್ತದೆ. ನಿಧಾನವಾಗಿ ಕೆಲಸ ಮಾಡುವ ಅಥವಾ ಮುಂದಿನ ವಾರವೋ ಮುಂದಿನ ತಿಂಗಳೋ ಮಾಡಿದರಾಯಿತು ಎನ್ನುವ ಮನೋಭಾವವಿರುತ್ತದೆ. ಕೆಲವರಿಗೆ ಮಧ್ಯಮ (Medium)ಸ್ಥಿತಿಯಲ್ಲಿರುತ್ತದೆ. ನಾಳೆಯೋ ನಾಡಿದ್ದೋ ಮಾಡಿದರಾಯಿತು ಎನ್ನುವ ಮನೋಭಾವ. ಕೆಲ

ಭಾಗ -೧೪

ಗ್ರಂಥದ ಮುಂದುವರಿಕೆ.. ಆರನೆಯದು ಸಮಾಧಾನ सम्यगास्थापनं बुद्धेः शुद्धे ब्रह्मणि सर्वदा । तत्समाधानमित्युक्तं  न तु चित्तस्य लालनम् ||२७|| ಸಮ್ಯಗಾಸ್ಥಾಪನಂ ಬುದ್ಧೇಃ ಶುದ್ಧೇ ಬ್ರಹ್ಮಣಿ ಸರ್ವದಾ| (= ಬುದ್ಧಿಯನ್ನು ಶುದ್ಧ ಬ್ರಹ್ಮನಲ್ಲಿ ಯಾವಾಗಲೂ ಚೆನ್ನಾಗಿ ಇಟ್ಟುಕೊಳ್ಳುವುದು) ತತ್ ಸಮಾಧಾನಮಿತ್ಯುಕ್ತಂ ನ ತು ಚಿತ್ತಸ್ಯ ಲಾಲನಮ್ ||೨೭|| (=ಅದನ್ನು (ಇದನ್ನು) ಸಮಾಧಾನವೆಂದು ಹೇಳಿದೆಯೇ ಹೊರತು ಚಿತ್ತ ಪೋಷಣೆಯನ್ನು ಅಲ್ಲ) ಶುದ್ಧ ಬ್ರಹ್ಮದಲ್ಲಿ ಬುದ್ಥಿಯನ್ನು ಸ್ಥಿರಗೊಳಿಸುವುದು ಎಂದರೆ ಧರ್ಮಾತೀತವಾದ ನಿರ್ಗುಣ ಬ್ರಹ್ಮನಲ್ಲಿ ಬುದ್ಧಿಯನ್ನು ನಿಶ್ಚಯಗೊಳಿಸಿಕೊಳ್ಳುವುದು (ಸಮ್ಯಕ್ =ಚೆನ್ನಾಗಿ , ಆಸ್ಥಾಪನಂ = ನೆಲೆಗೊಳಿಸುವುದು) ಮತ್ತು ಇದನ್ನೇ ಸಮಾಧಾನವೆಂದು ಹೇಳಲ್ಪಟ್ಟಿದೆ. ಮನಸ್ಸಿನ ಲಾಲನೆಯು ಸಮಾಧಾನ (ಸಮ್ಯಕ್ =ಚೆನ್ನಾಗಿ, ಆಧಾನಂ= ಇಡುವುದು) ಅಲ್ಲ ಎಂದು ಮೇಲಿನ ಶ್ಲೋಕದಲ್ಲಿ ತಿಳಿಸುತ್ತಾರೆ. ಸಮಾಧಾನ ಎನ್ನುವುದಕ್ಕೆ ಶಾಂತಿ ಎನ್ನುವ ಅರ್ಥವಿದ್ದರೂ ಸಹ ಇಲ್ಲಿ, ಬ್ರಹ್ಮನಲ್ಲಿ  ನಿಶ್ಚಯಸ್ವರೂಪವಾದ ಬುದ್ಧಿಯನ್ನು ನೆಲೆಗೊಳಿಸಿಕೊಳ್ಳುವುದನ್ನು ಸಮಾಧಾನ ಎಂದು ಹೇಳಿರುತ್ತಾರೆ. ’ಚಿತ್ತಸ್ಯ ಲಾಲನಮ್’ ಎಂದರೆ ಮನಸ್ಸಿನ ಲಾಲನೆ ಅಥವಾ ಮನಸ್ಸಿಗೆ ಮುದವಾಗುವಂತೆ ನೆಡೆದುಕೊಳ್ಳುವುದು ಎಂಬ ಅರ್ಥದಲ್ಲಿ ಹೇಳಿರುತ್ತಾರೆ. ಚಿತ್ತ ಎನ್ನುವುದಕ್ಕೆ ಸ್ಮೃತಿ ಎನ್ನುವ ಅರ್ಥವೂ ಬರುವುದರಿಂದ ಸ್ಮೃತಿ ಅಥವಾ ನೆನ

ಭಾಗ-೧೩

ಗ್ರಂಥದ ಮುಂದುವರಿಕೆ :- सहनं सर्वदुखानां अप्रतीकारपूर्वकम् । चिन्ताविलापरहितं सा तितिक्षा निगद्यते ॥२५॥ ಸಹನಂ ಸರ್ವದುಃಖಾನಾಂ ಅಪ್ರತೀಕಾರಪೂರ್ವಕಮ್ | (=ದುಃಖಗಳಿಗೆ ಪ್ರತಿಕ್ರಿಯೆ ತೋರದೆ (ದೂರದೆ) ಎಲ್ಲವನ್ನೂ ಸಹಿಸಿಕೊಳ್ಳುವುದು) ಚಿಂತಾವಿಲಾಪರಹಿತಂ ಸಾ ತಿತಿಕ್ಷಾ ನಿಗದ್ಯತೇ ||೨೫|| (=ಚಿಂತೆ-ಶೋಕಗಳಿಂದ ಮುಕ್ತನಾಗುವುದೇ ತಿತಿಕ್ಷೆಯು) ನಾಲ್ಕನೆಯದು ತಿತಿಕ್ಷಾ ಹೊರಗಿನ ವಿಷಯಗಳು ಯಾವಾಗ ಚಿತ್ತಕ್ಕೆ ಬಾಧಿಸುವುದಿಲ್ಲವೋ ಆಗ ಚಳಿ-ಮಳೆ-ಬಿಸಿಲು ಮುಂತಾದವುಗಳಲ್ಲಿ ವ್ಯತ್ಯಾಸವು ತಿಳಿಯುವುದಿಲ್ಲ, ದ್ವಂದ್ವವೂ ಇರುವುದಿಲ್ಲ.  ಕಾಲಕ್ಕನುಸಾರವಾಗಿ ಅವುಗಳು ವಿಕೋಪದಿಂದ ಬಂದರೂ ಸಹ ಅದನ್ನೂ ಸಹಿಸಿಕೊಳ್ಳುವುದು ತಿತಿಕ್ಷೆ ಎಂದು ಮೇಲಿನ ಶ್ಲೋಕದಲ್ಲಿ ಆಚಾರ್ಯರು ಹೇಳಿರುತ್ತಾರೆ. ಸಹಿಸಿಕೊಂಡಿರುವುದು ಎಂದರೆ , ಬಂದೊದಗಿದ್ದಕ್ಕೆ ಸಾಕಷ್ಟು ಗೊಣಗಿ, ಸಿಡುಕಿ ನಂತರ ’ಅಯ್ಯೋ ನನಗ್ಯಾಕೆ’ ಎಂದು ಸುಮ್ಮನಾಗುವುದಲ್ಲ ! , ಬದಲಾಗಿ ಅಪ್ರತೀಕಾರಪೂರ್ವಕವಾಗಿ ಎಂದರೆ ಯಾವುದೇ ಪ್ರತಿಕ್ರಿಯೆಯನ್ನು ತೋರದೆ ಆಗಿದ್ದಕ್ಕೆ ಚಿಂತಿಸದೆ, ಶೋಕಿಸದೆ ದುಃಖಗಳನ್ನು ಸಹಿಸಿಕೊಂಡಿರುವುದು ಎಂದು ಅರ್ಥ.  ಪ್ರತೀಕಾರವನ್ನು ತೋರದೆ ಸಹಿಸಿಕೊಳ್ಳುವುದು ತುಂಬಾ ಕಷ್ಟದ ಕೆಲಸವೇನೋ ನಿಜ ಆದರೆ ಅಂತಹ ಕಷ್ಟದ ಕೆಲಸವನ್ನೇ ಆತ್ಮಾಭ್ಯಾಸಿಯು ಮಾಡಬೇಕಿರುವುದು ಎನ್ನುವುದು ಮೇಲಿನ ವಾಕ್ಯದಲ್ಲಿ ಸ್ಪಷ್ಟವಾಗಿ ಕಾಣುತ್ತದೆ.  ಇಲ್ಲಿ ಗಾಂಧೀಜಿಯವರ ತತ್ವ

ವಿವೇಕ ಚೂಡಾಮಣಿ -ಭಾಗ-೧೨

ಗ್ರಂಥದ ಮುಂದುವರಿದ ಭಾಗ विरज्य विषयव्रातात् दोषदृष्ट्या मुहुर्मुहुः । स्वलक्ष्ये नियतावस्था मनसः शम उच्यते ॥२२॥ ವಿರಜ್ಯವಿಷಯವ್ರಾತಾತ್ ದೊಷದೃಷ್ಟ್ಯಾ ಮುಹುರ್ಮುಹುಃ | (= ಭೋಗವಸ್ತುಗಳಲ್ಲಿರುವ ದೋಷಗಳನ್ನು ಮತ್ತೆ-ಮತ್ತೆ ಕಂಡು ಭೋಗ ವಿಷಯಾಸಕ್ತಿಯನ್ನು ಬಿಡುವುದು) ಸ್ವಲಕ್ಷ್ಯೇ ನಿಯತಾವಸ್ಥಾ ಮನಸಃ ಶಮ ಉಚ್ಯತೇ ||೨೨॥ (=ಗುರಿಯ ಸಾಧನೆಗೆ ಮನೋನಿಗ್ರಹವನ್ನಿಟ್ಟುಕೊಳ್ಳುವುದೆ ಶಮವು ) ಸಾಧನ ಚತುಷ್ಟಯದ ಮೂರನೆಯ ಸಾಧನದ ನಿರೂಪಣೆಯನ್ನು ಮಾಡುತ್ತಾ ’ಶಮದಮಾದಿ’ ಆರು ಸಂಪತ್ತುಗಳ ವಿಚಾರವನ್ನು ಶ್ರೀ ಶಂಕರರು ವಿವರಿಸುತ್ತಾರೆ. ಮೊದಲನೆಯದಾಗಿ ’ಶಮ’ :- ಭೋಗವಸ್ತುಗಳಲ್ಲಿ ಕಂಡುಬರುವ ದೋಷಗಳನ್ನು ಗ್ರಹಿಸಿ ಅವುಗಳಲ್ಲಿ ಜಿಗುಪ್ಸೆಯನ್ನು ಹೊಂದಿ ಆತ್ಮವಿಷಯದಲ್ಲಿ ಮಾತ್ರವೇ ಮನಸ್ಸನ್ನು ತಲ್ಲೀನಗೊಳಿಸಿಕೊಳ್ಳುವುದನ್ನು ’ಶಮ’ ಎಂದು ಹೇಳುತ್ತಾರೆ. ಮನಸ್ಸನ್ನು ಹತೋಟಿಯಲ್ಲಿಡುವುದು ಎಂದರೆ, ಇಂದ್ರಿಯಯಗಳನ್ನು ನಿಗ್ರಹಿಸುವುದು ಎಂದು ತಿಳಿಯಬೇಕಾಗುತ್ತದೆ. ಮುಖ್ಯವಾಗಿ ಜ್ಞಾನೇಂದ್ರಿಯಗಳು (ಕಣ್ಣು, ಕಿವಿ, ಮೂಗು, ಚರ್ಮ, ನಾಲಿಗೆ) ವಿಷಯವಸ್ತುವಿನ ಗೊಡವೆಗೆ ಹೋಗದಂತೆ ಹತೋಟಿಯಲ್ಲಿಟ್ಟುಳ್ಳುವುದು ಎಂದು ಅರ್ಥ. ಅಪೇಯಪಾನವು ಮನೆಯಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕ ಹೊರಗಿನ ಅಂಗಡಿಯಲ್ಲೂ ಹಾನಿಕಾರಕವೆ !. ಜಾಗ ಬದಲಾದ ಮಾತ್ರಕ್ಕೆ ಅದರ ದೋಷಗುಣವೇನೂ ಬದಲಾಗುವುದಿಲ್ಲ. ದೋಷವನ್ನು ಗ್ರಹಿಸಿ ಒಟ್ಟಾರೆಯಾಗಿ ಭೋಗಲಾಲಸೆಯನ್ನು

ವಿವೇಕ ಚೂಡಾಮಣಿ - ಭಾಗ-೧೧

ಗ್ರಂಥದ ಮುಂದುವರಿದ ಭಾಗ तद्वैराग्यं जुगुप्सा या दर्शनश्रवणादिभिः । देहादिब्र्ह्मपर्यन्ते ह्यनित्ये भोगवस्तुनि ॥२१॥ ತದ್ವೈರಾಗ್ಯಂ ಜುಗುಪ್ಸಾ ಯಾ ದರ್ಶನಶ್ರವಣಾದಿಭಿಃ | (= ನೋಡುವುದು, ಕೇಳುವುದು ಮುಂತಾದವುಗಳಿಂದ ಹುಟ್ಟುವ ವೈರಾಗ್ಯ ) ದೇಹಾದಿಬ್ರಹ್ಮಪರ್ಯಂತೇ ಹ್ಯನಿತ್ಯೇ ಭೋಗವಸ್ತುನಿ ||೨೧|| (=ದೇಹದಿಂದ ಮೊದಲಾಗಿ ಬ್ರಹ್ಮದವರೆಗಿನ ಅನಿತ್ಯವಾದ ಭೋಗವಸ್ತುಗಳಲ್ಲಿ) ಬ್ರಹ್ಮವೇ ಸತ್ಯ ಜಗತ್ತು ಮಿಥ್ಯೆ ಎಂಬ ಧೃಡ ನಿಶ್ಚಯವು ಬಂದ ನಂತರ ಜಗತ್ತಿನ ವ್ಯಾವಹಾರಿಕ, ಪ್ರಾಪಂಚಿಕ ಭೋಗವಸ್ತುಗಳ ಬಗೆಗೆ ಜಿಗುಪ್ಸೆ ಅಥವಾ ಅನಾಸಕ್ತಿಯು ಹುಟ್ಟಬೇಕು ಮತ್ತು ಅಂತಹ ವೈರಾಗ್ಯದ ಭಾವವನ್ನು ಉಂಟುಮಾಡಿಕೊಳ್ಳಬೇಕು ಎಂದು ’ಇಹಾಮುತ್ರಫಲಭೋಗವೈರಾಗ್ಯ’ ಎಂಬ ಎರಡನೆಯ ಸಾಧನದಲ್ಲಿ ಶ್ರೀ ಶಂಕರರು ನಿರೂಪಿಸುತ್ತಾರೆ. ’ಇಹ’ ಎಂದರೆ ಈ ಜಗತ್ತಿನಲ್ಲಿ ದೇಹದ ಮೂಲಕ ಮೊದಲಾಗುವ ಎಲ್ಲಾ ಪ್ರಾಪಂಚಿಕ ಸುಖ-ಭೋಗಗಳ ಮೇಲಿನ ಜಿಗುಪ್ಸೆ ಎಂದಾಗುತ್ತದೆ. ವ್ಯಾವಹರಿಕ ಜಗತ್ತಿನಲ್ಲಿ ಆಕರ್ಷಣೆಗಳು, ಭೋಗಗಳು ಹುಟ್ಟುವುದೇ ದೇಹದ ಕರ್ಮೇಂದ್ರಿಯಗಳು, ಜ್ಞಾನೇಂದ್ರಿಯಗಳ ಮೂಲಕ ಎನ್ನುವಾಗ ಅಂತಹ ಎಲ್ಲಾ ಸುಖ-ಭೋಗಗಳ ಮೇಲಿನ ಆಸಕ್ತಿಯನ್ನು ಬಿಟ್ಟು ಕೇವಲಬ್ರಹ್ಮದಲ್ಲಿ ನಿಶ್ಚಯವಾಗುವುದು ಎಂದು ತಿಳಿಯಬೇಕಾಗುತ್ತದೆ. ’ಅಮುತ್ರ’ ಅಥವಾ ಪರಲೋಕ ಎಂದರೆ ನಮ್ಮ ಪುರಾಣಗಳಲ್ಲಿ ವರ್ಣಿಸಿರುವಂತೆ ಸಿಗಬಹುದಾದ ’ಸ್ವರ್ಗ’ ಸುಖ-ಭೋಗಗಳು.  ಸ್ವರ್ಗಸುಖವನ್ನೂ ತ್ಯಜಿಸ

ವಿವೇಕ ಚೂಡಾಮಣಿ - ಭಾಗ -೧೦

ಗ್ರಂಥದ ಮುಂದುವರಿದ ಭಾಗ:- साधनान्यत्र चत्वारि कथितानि मनीषिभिः । येषु सत्स्वेव सन्निष्ठा यदभावे न सिध्यति ॥१८॥ ಸಾಧನಾನ್ಯತ್ರ ಚತ್ವಾರಿ ಕಥಿತಾನಿ ಮನೀಷಿಭಿಃ | (= ಆತ್ಮವಿದ್ಯೆಯ ಸಾಧನಗಳು ನಾಲ್ಕು) ಯೇಷು ಸತ್ಸ್ವೇವ ಸನ್ನಿಷ್ಠಾ ಯದಭಾವೇ ನ ಸಿಧ್ಯತಿ ||೧೮|| (= ಸಾಧನಗಳಿದ್ದರೆ (=ಏವ) ಸಾಧನೆಯು ಸಾಧ್ಯ, ಇಲ್ಲದಿದ್ದರೆ ಇಲ್ಲ) ವಿಚಾರದಿಂದಲೇ ಜ್ಞಾನ ಎನ್ನುವುದನ್ನು ಈಗಾಗಲೇ ತಿಳಿದಿದ್ದೇವೆ. ಆತ್ಮವಿದ್ಯೆಯ ಸಿದ್ಧಿಗೆ ಇರುವ ಸಾಧನಗಳು ನಾಲ್ಕು . ಹೆಚ್ಚೆಂದರೂ ಇಷ್ಟೆ ಕಡಿಮೆಯೆಂದರೂ ಇಷ್ಟೆ ಎನ್ನುವುದು ಸೂಚಿತ. ನಾಲ್ಕು ಸಾಧನಗಳಿದ್ದರೆ ಆತ್ಮವಿದ್ಯೆಯು ಸಿದ್ಧಿಸುತ್ತದೆ ಮತ್ತು ಇವು ಇಲ್ಲದಿದ್ದರೆ ಸಿದ್ಧಿಯೂ ಇಲ್ಲ ಎಂಬರ್ಥದದಲ್ಲಿ ಹೇಳುತ್ತಾರೆ. ಇದೊಂದು ರೀತಿಯ ವ್ಯಾವರ್ತಕ ನಿಯಮ ಎನ್ನಬಹುದು. ಪಾಯಸಕ್ಕೆ ಮೆಣಸಿನಕಾಯಿ ಒಗ್ಗರಣೆ ಹಾಕುವುದು ಪಾಯಸದ ತಯಾರಿಕೆಯ ಸಾಧನಗಳಲ್ಲಿ ಇಲ್ಲ, ಹಾಗೂ ಒಗ್ಗರಣೆ ಹಾಕಿದರೆ ಪಾಯಸದ ಸಾಂಪ್ರದಾಯಿಕ ರುಚಿಯು ಕೆಡುತ್ತದೆ !. ಇಲ್ಲೂ ಕೂಡ ಇರುವುದು ನಾಲ್ಕೇ ಸಾಧನಗಳು. ಇದೇ ಕನಿಷ್ಠ ಮತ್ತು ಗರಿಷ್ಠ ಎನ್ನುವುದು ಸೂಚಿತ. ’ಮನೀಷಿಭಿಃ’ ಎಂಬಲ್ಲಿ ವೇದಜ್ಞಾನವುಳ್ಳವರು (ಶ್ರುತಿತಾತ್ಪರ್ಯ ಜ್ಞಾನವುಳ್ಳವರು) ಎಂದು ತಿಳಿಯಬೇಕು ಎನ್ನುವುದು ಸದ್ಗುರು ಚಂದ್ರಶೇಖರ ಭಾರತಿಗಳ ಒಕ್ಕಣೆ.  ಶ್ರುತಿಯ ಅವಲಂಬನೆಯಿಲ್ಲದೆ ಸಾಧಕರಿಗೆ ನಾಲ್ಕು ಸಾಧನಗಳ ವಿಚಾರವನ್ನು ತಿಳಿಯುವುದು ಮತ್ತು ಅನುಸರಿಸ

ವಿವೇಕ ಚೂಡಾಮಣಿ ಭಾಗ -೯

ಗ್ರಂಥದ ಮುಂದುವರಿದ ಭಾಗ अतो विचारः कर्तव्यो जिज्ञासोरात्मवस्तुनः | समासाध्य दयासिन्धुं गुरुं ब्रह्मविदुत्तमम् ||१५ ||  ಅತೋ ವಿಚಾರಃ ಕರ್ತವ್ಯೋ ಜಿಜ್ಞಾಸೋರಾತ್ಮವಸ್ತುನಃ | (=ಆತ್ಮವಿಚಾರ ಕರ್ತವ್ಯದ ಜಿಜ್ಞಾಸೆಗಾಗಿ ) ಸಮಾಸಾಧ್ಯ ದಯಾಸಿಂಧುಂ ಗುರುಂ ಬ್ರಹ್ಮವಿದುತ್ತಮಮ್ ||೧೫|| (= ಕರುಣಾಳುವೂ, ಬ್ರಹ್ಮಜ್ಞಾನಿಯೂ ಆಗಿರುವ ಗುರುವನ್ನು ಹೊಂದವುದು) ಆತ್ಮವಿದ್ಯೆಯ ಸಿದ್ಧಿಗಾಗಿ ಗುರುವಿನ ಬಳಿಗೆ ತೆರಳಬೇಕು ಎಂದು ಈ ಹಿಂದಿನ ಶ್ಲೋಕದಲ್ಲಿ ತಿಳಿದೆವು. ಇಂದಿನ ಕಾಲದಲ್ಲಿ ಗುರುಗಳೇನೋ ಸಾಕಷ್ಟು ಇರುವರು. ಗುರುಗಳ ಶಿಷ್ಯರೂ ಅಸಂಖ್ಯರಿದ್ದಾರೆ !. ಎಂತಹವರು ಗುರು ಎನ್ನಿಸಿಕೊಳ್ಳಲು ಅರ್ಹರಾಗುತ್ತಾರೆ ? ಎಂತಹ ಗುರುವಿನ ಶಿಷ್ಯರಾಗಿ ಆತ್ಮಾಭ್ಯಾಸವನ್ನು ಮೊದಲು ಮಾಡಬೇಕು? ಎಂಬ ’ಗೊಂದಲ’ಕ್ಕೆ ಶ್ರೀ ಶಂಕರರು ಮೇಲಿನ ಶ್ಲೋಕದ ಜೊತೆಗೆ ಮುಂದಿನ ಮೂರು ಶ್ಲೋಕಗಳ ಮೂಲಕ  ಪರಿಹಾರವನ್ನು ಒದಗಿಸುತ್ತಾರೆ. ಆಸಕ್ತನು ವಿಚಾರಾಧೀನನಾಗಿ ಆತ್ಮವಸ್ತುವಿನ ಜಿಜ್ಞಾಸೆಯೇ ತನ್ನ ಕರ್ತವ್ಯವೆಂದು ತಿಳಿದು ಯೋಗ್ಯ ಗುರುವನ್ನು ಹೊಂದಬೇಕು ಎಂದು ತಿಳಿಸುತ್ತಾರೆ. ’ದಯಾಸಿಂಧುಂ’ ಎಂದು ಹೇಳುವ ಮೂಲಕ ಅಧಿಕಾರಿಯು ಕರುಣೆಯ ಸಾಗರದಂತಿರಬೇಕು ಎಂದು ಸೂಚಿಸುತ್ತಾರೆ. ಜಾಣರಿಗೆ ಕಲಿಸುವುದು ಕಷ್ಟವೇನಲ್ಲ, ಆದರೆ ದಡ್ಡರಿಗೆ ತಾಳ್ಮೆಯಿಂದ ಮತ್ತು ಕರುಣೆಯಿಂದ ಹೇಳಿಕೊಡುವ ಅಧಿಕಾರಿಯು ಅಗತ್ಯ. ಒಂದು ಹನಿ ನೀರಿಗೂ ಸಮುದ್ರವು ಆಶ್ರಯವನ್ನು ನೀಡುತ

ವಿವೇಕ ಚೂಡಾಮಣಿ ಭಾಗ -೮

ಗ್ರಂಥದ ಮುಂದುವರಿದ ಭಾಗ अर्थस्य निश्चयो दृष्टो  विचारेण हितोक्तितः। न स्नानेन न दानेन प्राणायाम शतेनवा ॥१३॥ ಅರ್ಥಸ್ಯ ನಿಶ್ಚಯೋ ದೃಷ್ಟೋ ವಿಚಾರೇಣ ಹಿತೋಕ್ತಿತಃ| (= ಒಳ್ಳೆಯ ವಚನಗಳನ್ನು ಕೇಳಿ ವಿಚಾರಮಾಡುವುದರಿಂದಲೇ ಆತ್ಮಾರ್ಥ ನಿಶ್ಚಯವು) ನ ಸ್ನಾನೇನ ನ ದಾನೇನ ಪ್ರಾಣಾಯಾಮ ಶತೇನವಾ ||೧೨|| (=ಸ್ನಾನ, ದಾನ ಮತ್ತು ನೂರಾರು ಪ್ರಾಣಾಯಾಮಗಳಿಂದಲ್ಲ) ಸದ್ಗುರುಗಳಾದವರ ಒಳ್ಳೆಯ ಮಾತುಗಳನ್ನು , ಉಪದೇಶಗಳನ್ನು ಆಲಿಸುವುದರ ಜೊತೆಗೆ ಅಂತಹ ವಿಚಾರಗಳನ್ನು ಒರೆಗೆ ಹಚ್ಚಿ ತಿಳಿದುಕೊಂಡು ವಿವೆಚನೆಯಿಂದ ನಿರ್ಣಯಿಸಿಕೊಳ್ಳುವ ಆತ್ಮಾರ್ಥವು ಮಿಗಿಲಾದುದು. ಇಂತಹ ಆತ್ಮಾರ್ಥಜ್ಞಾನವು ಕೇವಲ ಸ್ನಾನ, ದಾನ ಮತ್ತು ನೂರಾರು ಬಾರಿ ಪ್ರಾಣಾಯಾಮಗಳನ್ನು ಮಾಡುವುದರಿಂದ ಸಿದ್ಧಿಸುವುದಿಲ್ಲ ಎಂದು ತಿಳಿಸುತ್ತಾರೆ. ಆಕ್ಷೇಪ : ’ವಸ್ತುಸಿದ್ಧಿರ್ವಿಚಾರೇಣ’ ಎಂದು ಈಗಾಗಲೇ ತಿಳಿದಿರುವುದರಿಂದ ಸದ್ಗುರುಗಳ ಆಪ್ತವಚನದ ಅಗತ್ಯವಿದೆಯೆ ? ಸಮಾಧಾನ :  ಹಗ್ಗವನ್ನೇ ಹಾವೆಂದು ತಿಳಿದು ಭ್ರಮೆಯಲ್ಲಿದ್ದಾಗ ವಾಸ್ತವದ ಅರಿವು ತಂತಾನೇ ಮೂಡುವುದು ಕಷ್ಟವಾಗುತ್ತದೆ. ಆಪ್ತರೊಬ್ಬರು ಹಿತವಾದ ಮಾತುಗಳಿಂದ ಸಂದರ್ಭವನ್ನು ವಿವರಿಸಿದಾಗ ಮನಸ್ಸು ತಿಳಿಯಾಗುತ್ತದೆ. ಭ್ರಮೆಯು ತೊಲಗುತ್ತದೆ. ಶ್ಲೋಕದ ಎರಡನೆಯ ವಾಕ್ಯವನ್ನು ಯೋಗಗುರು ’ಬಾಬಾ ರಾಮದೇವರು ’ ಗಮನಿಸಿದರೆ, ಬಹುಶಃ ಅವರಿಗೆ ಕಡುಕೋಪ ಬರಬಹುದು. ವೇದಾಂತದ ವಿಚಾರವೇ ಹಾಗೆ !. ಅರ್ಜುನನು ಮ

ವಿವೇಕ ಚೂಡಾಮಣಿ - ಭಾಗ ೭

ಗ್ರಂಥದ ಮುಂದುವರಿದ ಭಾಗ चित्तस्य शुद्धये कर्म न तु वस्तूपलब्धये । वस्तुसिद्धिर्विचरेण न  किञ्चित्   कर्मकोटिभिः ॥११॥  ಚಿತ್ತಸ್ಯ ಶುದ್ಧಯೇ ಕರ್ಮ ನ ತು ವಸ್ತೂಪಲಬ್ಧಯೇ | (=ಚಿತ್ತಶುದ್ಧಿಗಾಗಿ ಕರ್ಮ; ಆತ್ಮವಸ್ತು(ಜ್ಞಾನ)ವನ್ನು ಪಡೆಯಲು ಅಲ್ಲ) ವಸ್ತುಸಿದ್ಧಿರ್ವಿಚಾರೇಣ ನ ಕಿಂಚಿತ್ ಕರ್ಮಕೋಟಿಭಿಃ ||೧೧|| (=ವೈಚಾರಿಕತೆಯಿಂದ ಜ್ಞಾನ; ಕೋಟಿ ಕರ್ಮಾಚರಣೆಯಿಂದಲ್ಲ) ಕರ್ಮಗಳನ್ನು ಆಚರಿಸುವುದರಿಂದ ಮುಕ್ತಿಯಂತೂ ದೊರೆಯುವುದಿಲ್ಲ ಎಂದಾದಲ್ಲಿ ಅವುಗಳನ್ನು ಆಚರಿಸುವುದಾದರೂ ಏಕೆ ? ಎಂಬ ಪ್ರಶ್ನೆಗೆ ಮೇಲಿನ ಶ್ಲೋಕದ ಮೂಲಕ ಶಂಕರರು ಉತ್ತರವನ್ನು ತಿಳಿಸುತ್ತಾರೆ. ’ಚಿತ್ತಶುದ್ಧಿಗಾಗಿ ಕರ್ಮ’ ಎಂದು ಹೇಳುತ್ತಾರೆ. ಬುದ್ಧಿಗೆ ಆವರಿಸುವ ಭ್ರಮೆ ಅಥವಾ ಅಜ್ಞಾನವನ್ನು ತೊಡೆದುಹಾಕಲು ಕರ್ಮಗಳನ್ನು ಆಚರಿಸಬೇಕು ಎನ್ನುತ್ತಾರೆ. ಮೊದಲು ಅಜ್ಞಾನವನ್ನು ಕಳೆದುಕೊಂಡರೆ ಜ್ಞಾನದ ಮಾರ್ಗ ಯಾವುದು ಎಂದು ತಂತಾನೇ ಕಾಣಿಸುತ್ತದೆ. ಜ್ಞಾನಸಿದ್ಧಿಗೆ ಬೇಕಾಗುವ ಧೃಡತೆ, ಏಕಾಗ್ರತೆ, ಸಹಿಷ್ಣುತೆ ಇತ್ಯಾದಿಗಳು ಮಾಡುವ ಕರ್ಮದಿಂದ ನೆಲೆಗೊಳ್ಳುತ್ತವೆ ಮತ್ತು ಸಾಧನೆಯ ಹಾದಿಗೆ ದಾರಿದೀಪವಾಗುತ್ತದೆ. ಸಮಚಿತ್ತಕ್ಕಾಗಿ ಕರ್ಮವೇ ಹೊರತು ಆತ್ಮವಸ್ತುವನ್ನು ಅಥವಾ ಆತ್ಮಜ್ಞಾನವನ್ನು ಪಡೆಯಲು ಅಲ್ಲ ಎಂದು ಹೇಳುತ್ತಾರೆ. ಮೇರುಪರ್ವತವನ್ನು ಅಥವಾ ಎವರೆಸ್ಟ್ ಅನ್ನು ಏರಬೇಕೆನ್ನುವವರು ಅದಕ್ಕೆ ಬೇಕಾಗುವ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಳ್ಳಬೇ

ವಿವೇಕ ಚೂಡಾಮಣಿ -ಭಾಗ ೬

ಗ್ರಂಥದ ಮುಂದುವರಿದ ಭಾಗ अतो विमुक्यै प्रयतेत विद्वान् सन्यस्त बाह्यार्थ सुखस्पृहसन् | संतं महातं समुपेत्य देशिकं तेनोपदिश्टार्थ समाहितात्मा ||८|| ಅತೋ ವಿಮುಕ್ತ್ಯೈ ಪ್ರಯತೇತ ವಿದ್ವಾನ್ ಸನ್ಯಸ್ತ ಬಾಹ್ಯಾರ್ಥ ಸುಖಸ್ಪೃಹಸನ್ | ಸಂತಂ ಮಹಾತಂ ಸಮುಪೇತ್ಯ ದೇಶಿಕಂ ತೇನೋಪದಿಷ್ಟಾರ್ಥ ಸಮಾಹಿತಾತ್ಮಾ ||೮|| ದ್ರವ್ಯದಿಂದ, ವಿತ್ತದಿಂದ ಫಲದ ಮೇಲೆ ಬಯಕೆಗಳು ಉಂಟಾಗಿ ಜ್ಞಾನವರ್ಧನೆಗೆ ಅಡಚಣೆಯಾಗುವುದರಿಂದ ತಿಳುವಳಿಕೆಯುಳ್ಳವರು ಜ್ಞಾನಮಾರ್ಗದಿಂದಲೇ ಮುಮುಕ್ಷುತ್ವಕ್ಕೆ ಯತ್ನಿಸಬೇಕು ಎಂದು ಶ್ರೀ ಶಂಕರರು ಹೇಳುತ್ತಾರೆ. ಮೇಲಿನ ಶ್ಲೋಕದ ಅರ್ಥವನ್ನು ಗಮನಿಸೋಣ. ಅತೋ ವಿಮುಕ್ತ್ಯೈ ಪ್ರಯತೇತ ವಿದ್ವಾನ್ (= ವಿವೇಕಿಯು ಮುಕ್ತಿಗಾಗಿ ಯತ್ನಿಸಬೇಕು) ಸನ್ಯಸ್ತ ಬಾಹ್ಯಾರ್ಥ ಸುಖಸ್ಪೃಹಸನ್ (= ಬಾಹ್ಯ ಸುಖಗಳ ಆಸೆಯನ್ನು ಮೊದಲು ಬಿಡಬೇಕು) ಸಂತಂ ಮಹಾತಂ ಸಮುಪೇತ್ಯ ದೇಶಿಕಮ್ (=ಮಹಾತ್ಮರಾದ ಗುರುಗಳ ಸಂಗವನ್ನು ಹೊಂದಬೇಕು) ತೇನೋಪದಿಷ್ಟಾರ್ಥ ಸಮಾಹಿತಾತ್ಮಾ  (=ತನ್ನ ಇಷ್ಟಾರ್ಥ ಸಿದ್ಧಿಗಾಗಿ ಯತ್ನಿಸಬೇಕು) ಕರ್ಮದಿಂದ , ಸಂಪತ್ತಿನಿಂದ ಮುಕ್ತಿಯು ದೊರಕುವುದಿಲ್ಲವಾದ್ದರಿಂದ ತಿಳುವಳಿಕೆಯುಳ್ಳವನು (ವಿದ್ವಾನ್) ಮಹಾತ್ಮರಾದ ಗುರುಗಳ ಸಂಗವನ್ನು ಹೊಂದಿ ಅವರ ಉಪದೇಶ ತತ್ತ್ವಗಳನ್ನು ಅರಿತು ಹೊರಗಿನ ಕ್ಷಣಿಕವಾದ ವಿಷಯಗಳ ಬಗೆಗೆ ಆಸಕ್ತಿಯನ್ನು ಬಿಟ್ಟು ಆತ್ಮಸಾಕ್ಷಾತ್ಕಾರಕ್ಕಾಗಿ ಯತ್ನಿಸಬೇಕು ಎಂಬುದು ಮೇಲಿನ ಶ್ಲೋಕದ ತಿರುಳು. ’ವಿದ

ವಿವೇಕ ಚೂಡಾಮಣಿ ಭಾಗ -೫

 ಗ್ರಂಥದ ಮುಂದುವರಿದ ಭಾಗ पठन्तु    शास्त्राणि  यजन्तु   देवान् कुर्वन्तु   कर्माणि  भजन्तु  देवताः । आत्मैक्य बोधेन विना विमुक्ति- र्न सिध्यति ब्रह्म शतान्तरेपि  ॥६॥ ಪಠಂತು ಶಾಸ್ತ್ರಾಣಿ ಯಜಂತು ದೇವಾನ್ ಕುರ್ವಂತು ಕರ್ಮಾಣಿ ಭಜಂತು ದೇವತಾಃ| ಆತ್ಮೈಕ್ಯ ಬೋಧೇನ ವಿನಾ ವಿಮುಕ್ತಿ- -ರ್ನ ಸಿಧ್ಯತಿ ಬ್ರಹ್ಮ ಶತಾಂತರೇಪಿ ||೬|| ಮುಕ್ತಿಯ ಮಹತ್ವವನ್ನು ತಿಳಿಸುತ್ತಾ ಶ್ರೀ ಶಂಕರರು ಮುಂದೆ ಬಹಳ ದಿಟ್ಟವಾದ ಧೀರವಾದ ಘೋಷಣೆಯನ್ನು ಮಾಡುತ್ತಾರೆ. ಮೇಲಿನ ಶ್ಲೋಕದ ವಿವರಣೆಯನ್ನು ತಿಳಿಯುವುದರ ಮೂಲಕ ಆ ಉದ್ಘೋಷವೇನು ಎಂಬುದನ್ನು ಅರಿಯೋಣ. ಪಠಂತು ಶಾಸ್ತ್ರಾಣಿ (=ಶಾಸ್ತ್ರಗಳನ್ನು ಓದುವುದು) ,     ಯಜಂತು ದೇವಾನ್ (=ದೇವತೆಗಳನ್ನು ಪೂಜಿಸುವುದು) ಕುರ್ವಂತು ಕರ್ಮಾಣಿ (=ಕರ್ಮಗಳನ್ನು ಮಾಡುವುದು),  ಭಜಂತು ದೇವತಾ: (=ದೇವತೆಗಳನ್ನು ಸ್ತುತಿಸುವುದು) ಆತ್ಮ್ಯೆಕ್ಯ ಬೋಧೇನ ವಿನಾ ವಿಮುಕ್ತಿಃ (= ಆತ್ಮಜ್ಞಾನ(ಬ್ರಹ್ಮ ಸಾಕ್ಷಾತ್ಕಾರೆ) ವಿಲ್ಲದೆ ಮುಕ್ತಿಯಿಲ್ಲ)   ನ ಸಿಧ್ಯತಿ ಬ್ರಹ್ಮ ಶತಾಂತರೇಪಿ (= ನೂರು ಚತುರ್ಮುಖ ಬ್ರಹ್ಮರು ಆಗಿಹೋದರೂ ಸಿದ್ಧಿಸದು) "ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಪಠಿಸಿದರಿಲ್ಲ" ಎಂಬ ದಾಸವಾಣಿಯನ್ನು ಕೇಳಿರುತ್ತೇವೆ.ಶಾಸ್ತ್ರಗ್ರಂಥಗಳನ್ನು ಓದುವುದರಿಂದ, ದೇವತೆಗಳನ್ನು ಪೂಜಿಸುವುದರಿಂದ, ಕರ್ಮಾನುಷ್ಠಾನಗಳನ್ನು ಆಚರಿಸುವುದರಿಂದ, ದೇವತೆಗಳನ್ನು