ಪೋಸ್ಟ್‌ಗಳು

ಜನವರಿ, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಾಗ-೧೮

मूलम् = ಮೂಲ स्वामिन्नमस्ते नतलोकबन्धो  करुण्यसिन्धो पतितं भवाब्धौ । मामुद्धरात्मीयकटाक्षदृष्ट्या  ऋज्व्याऽतिकारुण्यसुधाभिवृष्ट्या ॥೩೬|| ಸ್ವಾಮಿನ್ನಮಸ್ತೇ ನತಲೋಕ ಬಂಧೋ ಕಾರುಣ್ಯಸಿಂಧೋ ಪತಿತಂ ಭವಾಬ್ಧೌ  | ಮಾಮುದ್ಧರಾತ್ಮೀಯ-ಕಟಾಕ್ಷದೃಷ್ಟ್ಯಾ ಋಜ್ವ್ಯಾಽತಿಕಾರುಣ್ಯ-ಸುಧಾಭಿವೃಷ್ಟ್ಯಾ || ೩೬|| ಪ್ರತಿಪದಾರ್ಥ: (ನತಲೋಕಬಂಧೋ =ನಮಿಸುತ್ತಿರುವ ಜನರ ಬಂಧುವೆ, ಕಾರುಣ್ಯ ಸಿಂಧೋ = ಕರುಣಾಸಾಗರನೆ, ಸ್ವಾಮಿನ್ = ಸ್ವಾಮಿಯೆ-ಗುರುವೆ, ತೇ =ನಿನಗೆ, ನಮಃ= ನಮನಗಳು ;  ಭವಾಬ್ಧೌ =ಸಂಸಾರಸಾಗರದಲ್ಲಿ , ಪತಿತಂ = ಬಿದ್ದಿರುವ-ನೊಂದಿರುವ, ಮಾಂ- ನನ್ನನ್ನು, ಋಜ್ವ್ಯಾ = ಸರಳವಾದ-ಒಳ್ಳೆಯದಾದ, ಅತಿಕಾರುಣ್ಯ -ಸುಧಾಭಿವೃಷ್ಟ್ಯಾ = ಕರುಣೆಯೆಂಬ ಅಮೃತವನ್ನು ಸುರಿಸುತ್ತಿರುವ, ಆತ್ಮೀಯ-ಕಟಾಕ್ಷ-ದೃಷ್ಟ್ಯಾ = ನಿನ್ನ ಅನುಗ್ರಹದ ದೃಷ್ಟಿಯಿಂದ, ಉದ್ಧರ = ಉಧ್ಧಾರಮಾಡು. ) ತಾತ್ಪರ್ಯ : ನಮಿಸುತ್ತಿರುವ ಜನಗಳ ಬಂಧುವೂ ಕರುಣಾಸಾಗರನೂ ಆದ ಗುರುವೇ ನಿನಗೆ ನಮಸ್ಕಾರವು. ಸಂಸಾರಸಾಗರದಲ್ಲಿ ಬಿದ್ದು ಭ್ರಮೆಗೊಳಗಾಗಿರುವ ನನ್ನನ್ನು ನಿನ್ನ ಕರುಣಾಮೃತವನ್ನು ಸುರಿಸುತ್ತಿರುವ ಕಣ್ಣುಗಳಿಂದ ದಿಟ್ಟಿಸಿ- ಅನುಗ್ರಹಿಸಿ ಉದ್ಧಾರಮಾಡು. ವಿವರಣೆ: ಜ್ಞಾನಾರ್ಥಿಯು ಬ್ರಹ್ಮದ ಅರಿವನ್ನು ಪಡೆಯುವ ವಿಷಯವನ್ನು ಮತ್ತು ಪರಿಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಬ್ರಹ್ಮಜ್ಞಾನಿಯಾದ ಗುರುವಿನ ಬಳಿಸಾರಿಬೇಕು ಎಂದು ಆಚಾರ್ಯರು ಹೇ