ಪೋಸ್ಟ್‌ಗಳು

ಏಪ್ರಿಲ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಭಾಗ - ೨೦

मूलम् - ಮೂಲ: अयं स्व्भावस्स्व्त एव यत्पर श्रमापनोदप्रवणं महात्मनाम् । सुधांशुरेष स्वयमर्क - कर्कश-प्रभाभितत्पा-मवति क्षितिं किल ॥೩೯। ಅಯಂ ಸ್ವಭಾವಃ ಸ್ವತ ಏವ ಯತ್ಪರ-ಶ್ರಮಾಪನೋದ -ಪ್ರವಣಂ  ಮಹಾತ್ಮನಾಮ್ | ಸುಧಾಂಶುರೇಷ ಸ್ವಯಮರ್ಕ-ಕರ್ಕಶ-ಪ್ರಭಾಽಭಿತಪ್ತಾಮವತಿ ಕ್ಷಿತಿಂ ಕಿಲ ||೩೯|| ಪ್ರತಿಪದಾರ್ಥ : (ಸ್ವತಃ ಏವ = ತಾವಾಗಿಯೇ, ಪರಶ್ರಮಾಪನೋದ-ಪ್ರವಣಂ ಯತ್ = ಇತರರ ಕಷ್ಟ(ಶ್ರಮ)ಪರಿಹಾರದಲ್ಲಿ ಪ್ರವೃತ್ತಿಯು ಯಾವುದೋ, ಅಯಂ = ಇದು ಮಹಾತ್ಮರ, ಸ್ವಭಾವಃ = ಸಹಜಗುಣ, ಅರ್ಕ-ಕರ್ಕಶಪ್ರಭಾ-ಅಭಿತಪ್ತಾಂ = ಸೂರ್ಯನ ಪ್ರಖರವಾದ ಬಿಸಿಲಿನಿಂದ ಬೆಂದಿರುವ, ಕ್ಷಿತಿಂ = ಭೂಮಿಯನ್ನು, ಏಷಃ ಸುಧಾಂಶುಃ = ಈ ಚಂದ್ರಮನು, ಸ್ವಯಂ = ತಾನೇ, ಅವತಿ ಕಿಲ = ರಕ್ಷಿಸುವನಲ್ಲವೆ ? ) ತಾತ್ಪರ್ಯ : ಇತರರ ಕಷ್ಟವನ್ನು, ಬೇನೆಗಳನ್ನು ಪರಿಹರಿಸುವುದರಲ್ಲಿ ತಾವಾಗಿಯೇ ಮುನ್ನುಗುವುದು ಮುಂದಾಲೋಚಿಸುವುದು ಮಹಾತ್ಮರು ಜ್ಞಾನಿಗಳೆನಿಸಿಕೊಂಡವರ ಸಹಜಗುಣವು.  ನೇಸರನ ತುಂಬ ಚುರುಕಾದ ಬಿಸಿಲಿನಿಂದ ಬೇಯುವ ಭೂಮಿಯನ್ನು ತಿಂಗಳನು ತಾನೇ ತನ್ನ  ಬೆಳಕಿನಿಂದ ತಂಪಾಗಿಸುವುದಿಲ್ಲವೆ ? . ವಿವರಣೆ : ಕಬ್ಬಿನಲ್ಲಿ ಸಿಹಿಯು ಏಕಿರಬೇಕು ಎಂಬ ಪ್ರಶ್ನೆಯೇ ಅಸಂಗತವಾಗಿಬಿಡುತ್ತದೆ. ಸಕ್ಕರೆಯಲ್ಲಿ ಸಿಹಿಯ ಕಾರಣವನ್ನು ಹುಡುಕಿದಂತೆ !.  ಕಬ್ಬಿನಲ್ಲಿ ಸಿಹಿಯು ಇರುವುದು ಹುಟ್ಟಿನಿಂದಲೇ ಬಂದುದಾಗಿರುತ್ತದೆ.  ಹಾಗೆಯೇ ಬ್ರಹ್ಮಜ್ಞಾನಿಗಳೆ